ಎಎಪಿ: ಜು.30ಕ್

ಎಎಪಿ: ಜು.30ಕ್ಕೆ ಶಿಕ್ಷಣ ಸಮ್ಮೇಳನ


ಪ್ರಜಾವಾಣಿ ವಾರ್ತೆ Updated:
28 ಜುಲೈ 2021, 08:48 IST
ಅಕ್ಷರ ಗಾತ್ರ :ಆ |ಆ |ಆ
ಬೆಂಗಳೂರು: ‘ಆಮ್‌ ಆದ್ಮಿ ಪಕ್ಷದ ವತಿಯಿಂದ ‘ಶಿಕ್ಷಣ ನಮ್ಮ ಹಕ್ಕು, ಶಿಕ್ಷಣ ನಿಮ್ಮ ಜವಾಬ್ದಾರಿ’ ಎಂಬ ಶೈಕ್ಷಣಿಕ ಸಮ್ಮೇಳನಗಳನ್ನು ಇದೇ 30ರಂದು ಸಂಜೆ 6 ಗಂಟೆಗೆ ಲ್ಯಾವೆಲ್ಲೆ ರಸ್ತೆಯ ರೋಟರಿ ಕ್ಲಬ್‌ನಲ್ಲಿ ಆಯೋಜಿಸಲಾಗಿದೆ’ ಎಂದು ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ತಿಳಿಸಿದರು.
ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,‘ಪ್ರಸ್ತುತ ಶೈಕ್ಷಣಿಕ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವುದು ಹಾಗೂ ಅಗತ್ಯ ಬದಲಾವಣೆ ತರುವ ಸಂಬಂಧ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.
‘ದೆಹಲಿ ಶಾಸಕಿ ಅತಿಶಿ ಮರ್ಲೆನಾ ಹಾಗೂ ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರು ಶಿಕ್ಷಣಕ್ಕೆ ಸಂಬಂಧಿಸಿದಂತೆ ವಿಶೇಷ ಉಪನ್ಯಾಸ ನೀಡಲಿದ್ದಾರೆ. ನ್ಯಾಷನಲ್ ಲಾ ಸ್ಕೂಲ್‌ನ ಪ್ರಾಧ್ಯಾಪಕ ಬಾಬು ಮ್ಯಾಥ್ಯು, ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಭಾಗವಹಿಸಲಿದ್ದಾರೆ’ ಎಂದು ಮಾಹಿತಿ ನೀಡಿದರು.
‘ಕರ್ನಾಟಕದ ಶಿಕ್ಷಣ ವ್ಯವಸ್ಥೆಯ ಬಿಕ್ಕಟ್ಟಿಗೆ ಕಾರಣ ಮತ್ತು ಪರಿಹಾರ’ ಚರ್ಚೆಯಲ್ಲಿ ಕೆಎಎಂಎಸ್‌ನ ಮುಖ್ಯಸ್ಥ ಶಶಿಕುಮಾರ್, ಗುರು ಕಾಶಿನಾಥನ್, ಅಕ್ಷರ ಫೌಂಡೇಷನ್‌ನ ಪುಷ್ಪಾ ತಂತ್ರಿ, ಶಿಕ್ಷಕಿ ಉಷಾ ಮೋಹನ್, ದಕ್ಷ್‌ನ ಸೂರ್ಯ ಪ್ರಕಾಶ್ ಭಾಗವಹಿಸಲಿದ್ದಾರೆ’ ಎಂದರು.

Related Keywords

Bangalore , Karnataka , India , Sun Prakash , Prithvi Reddy , Usha Mohan , Ramesh Kumar , Education The Convention , President Mohan , பெங்களூர் , கர்நாடகா , இந்தியா , பிரித்துவி சிவப்பு , உஷா மோகன் , ரமேஷ் குமார் , ப்ரெஸிடெஂட் மோகன் ,

© 2025 Vimarsana